ದಿನಾಂಕ: 20-11-2025 ಗುರುವಾರ ರಂದು ಹಿರೇಕುಂಬಳಗುಂಟೆ ಗ್ರಾಮಸ್ಥರು ಸೇರಿ ಹಿರೇಹಡಗಲಿ ಗ್ರಾಮಕ್ಕೆ ಬಂದು ಪೂಜ್ಯರಿಗೆ ಜಾತ್ರೆಗೆ ಭಿನ್ನ ಹಾಕಿದರು. ದಿನಾಂಕ: 25-11-2025 ಮಂಗಳವಾರ ರಂದು ಶ್ರೀಗುರು ಹಾಲಸ್ವಾಮಿಯ 11 ದಿನದ ರಣಗಾಂಭ ಪೂಜೆಯನ್ನು ಮಾಡಲಾಯಿತು. ವಿಜಯನಗರ ಜಿಲ್ಲೆ, ಕೂಡ್ಲಿಗಿ ತಾಲ್ಲೂಕು, ಹಿರೇಕುಂಬಳಗುಂಟೆ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ 20ನೇ ವರ್ಷದ ಜಾತ್ರಾ ಮಹೋತ್ಸವದ "ಆಹ್ವಾನ ಪತ್ರಿಕೆ" ದಿನಾಂಕ 04-12-2025 ನೇ ಗುರುವಾರ ಶ್ರೀಗುರು ಹಾಲಸ್ವಾಮಿಯ ಮಹಾಕಾರ್ತಿಕೋತ್ಸವ ದಿನಾಂಕ 05-12-2025 ನೇ ಶುಕ್ರವಾರ ಬೆಳಿಗ್ಗೆ ಶ್ರೀಗುರು ಹಾಲಸ್ವಾಮಿಯ ಕರ್ತೃ ಗದ್ದುಗೆಗೆ ಮಹಾರುದ್ರಾಭೀಷೇಕ ಶ್ರೀ ಮಠದ ಹೆಚ್.ಎಂ. ಗಂಗಾಧರಯ್ಯ ಹಾಗೂ ಗ್ರಾಮದ ಸಕಲ ಸದ್ಭಕ್ತರಿಂದ ನೇರವೇರುವುದು ತದನಂತರ ರಾತ್ರಿ 10-30ಕ್ಕೆ ಶ್ರೀಸ್ವಾಮಿಯ ಮುಳ್ಳುಗದ್ದುಗೆ ಮಹೋತ್ಸವ ನೇರವೇರುವುದು. ದಿನಾಂಕ 06-12-2025 ನೇ ಶನಿವಾರ ಬೆಳಿಗ್ಗೆ 10-30 ಕ್ಕೆ ಶ್ರೀ ಹೆಚ್.ಜಿ. ಮೂಗನಗೌಡ್ರು ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ ಮತ್ತು ತೇಜಿಭಿನ್ನ ತದನಂತರ ಸಾಯಂಕಾಲ 4-00 ಗಂಟೆಗೆ ಶ್ರೀಗುರು ಹಾಲಸ್ವಾಮಿಯ ಮಹಾರಥೋತ್ಸವ ಜರುಗುವುದು. ತದನಂತರ ರಾತ್ರಿ "ಕಲಿತಕಳ್ಳ ಸಾಮಾಜಿಕ ನಾಟಕ ಇರುತ್ತದೆ" * ಈ ಎಲ್ಲಾ ಕಾರ್ಯಕ್ರಮಗಳು ಹಿರ...
"ಪಂಚಾಕ್ಷರೀ...ಕುಂಟ-ಕುರುಡರ ಕುಬೇರನಪ್ಪಾ ನೀನು!! ಅವರ ದಾರಿಯ ಬೆಳಕಾಗು..ಸಾರ್ಥಕವಾಗಲಿ ನಿನ್ನ ಬದುಕು ಗವಾಯಿ" - ಗಾನಯೋಗಿ ಪಂಚಾಕ್ಷರಿ ಗವಾಯಿಗಳಿಗೆ ಹಾನಗಲ್ ಕುಮಾರಸ್ವಾಮಿಗಳು ಹೇಳುತ್ತಿದ್ದರಂತೆ ಆಗಾಗ! ಈ ಮಾತು, ನಮ್ಮ ಪ.ಪೂ.ಸದ್ಗುರು ಶಿವಯೋಗಿ ವಿಶ್ವಾರಾಧ್ಯ ಹಾಲಶ್ರೀಗಳನ್ನು ನೋಡಿದಾಗ ನೆನಪಾಗಿಬಿಡುತ್ತದೆ. ಗವಾಯಿಗಳು ಕುಂಟ-ಕುರುಡರ ಕುಬೇರರಾದರೆ, ಈ 'ಮೌನ ಋಷಿ'ಗಳು ಆಡುವ ಮಕ್ಕಳಿಗೆ ಕುಬೇರರು!! ಅವರಿದ್ದೆಡೆ ಮಕ್ಕಳ ಕಲರವ. ಅವರ ತೊಡೆಯ ಮೇಲೆ ಹಾಲುಗೂಸಿನ ಕಿಲಕಿಲದ ನಗು!! ಅವರಿದ್ದೆಡೆ ಶಾಂತಿಯ ಪಾರಿವಾಳಗಳು ಹಾರಾಡುತ್ತವೆ...ತುಂಟ ಗಿಳಿಗಳು ತೊದಲಾಡುತ್ತವೆ.ನವಿಲು ಗರಿಬಿಚ್ಚಿ ಕುಣಿಯುತ್ತದೆ. ಅಯ್ಯೋ...ಅವರು ಕೂತ ಕಡೆ ತಂಗಾಳಿಯೇ ತಲೆಬಾಗಿ ಬೀಸುತ್ತದೆ. In fact ಅವರೂ ಕೂಡ ಮಗುವಿನಂಥವರು. ಇವರಿಗೆ ವಯಸ್ಸಾಗುವುದಿಲ್ಲ..ಅವರೆಂದಿಗೂ ಬಾಲ್ಯದ ಹಸುಳೆಯ ಮನಸ್ಸು ಹೊತ್ತೇ ಬದುಕುತ್ತಾರೇನೋ ಅನಿಸುತ್ತದೆ.ಅವರು ಯಾವತ್ತೂ ಕೋಪಿಸಿಕೊಂಡದ್ದು ನೋಡಿಲ್ಲ. ಈ ಜಮಾನದ ಜನರ ಮನಃಸ್ಥಿತಿಗಳ ಅದಃಪತನವನ್ನು ನೋಡಿ, ನಮ್ಮಂಥವರಿಗೆ ರೇಜಿಗೆ ಹುಟ್ಟುತ್ತದೆ..ಆದರೆ, ಅವರು ಅಂಥವರನೆಲ್ಲಾ ನಿರ್ಲಿಪ್ತರಾಗಿ ನೋಡುತ್ತಿರುತ್ತಾರೆ. ಯಾರನ್ನೂ ದೂಷಿಸಿಸಿದ್ದನ್ನು ನಾನು ಕೇಳಿಲ್ಲ. Even ತಮ್ಮ ಬಗ್ಗೆ ಮಾತಾಡಿದವರನ್ನೂ ಕೂಡ!! ಯಾವ ಜಾತಿ-ಧರ್ಮ,ಇದ್ದವ-ಇಲ್ಲದವ ಎಂಬ ಬೇಧ ಮಾಡದೆ ಎಲ್ಲರನ್ನೂ ಅದೇ ಮೃದು ಮಾತಿನಿಂದ ಸಂತೈಸುತ್ತಾರೆ. ವಿಶ...